ಬೆಂಗಳೂರಿನಲ್ಲೂ ಕೃಷಿ ಕಾಯ್ದೆ ವಿರುದ್ಧ ರೈತರ ಕಹಳೆ.. ಅನ್ನದಾತರನ್ನ ವಶಕ್ಕೆ ಪಡೆದ ಪೊಲೀಸರು!
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲೂ ಪ್ರತಿಭಟನೆ ನಡೆಸಲಾಗುತ್ತಿದ್ದು, ಯಲಹಂಕ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದ ರೈತರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಯಲಹಂಕದಲ್ಲಿ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತ್ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾಗಿ ಕೂಗಿ, ಪ್ರತಿಭಟನೆ ನಡೆಸುತ್ತಿದ್ದಾಗ ಅವರನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ.