ವಿದ್ಯಾಕಾಶಿಗೆ ತಟ್ಟದ ಭಾರತ ಬಂದ್ ಬಿಸಿ: ಎಂದಿನಂತೆ ಸಂಚಾರ, ವಹಿವಾಟು ಆರಂಭ - ವಿವಿಧ ಬೇಡಿಕೆ ಈಡೇರಿಕೆಗಾಗಿ ಕರೆ ನೀಡಿರುವ ಭಾರತ ಬಂದ್
🎬 Watch Now: Feature Video

ಧಾರವಾಡ: ಕಾರ್ಮಿಕ ಒಕ್ಕೂಟಗಳು ವಿವಿಧ ಬೇಡಿಕೆ ಈಡೇರಿಕೆಗಾಗಿ ಕರೆ ನೀಡಿರುವ ಭಾರತ ಬಂದ್ಗೆ ಧಾರವಾಡದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ವಾಹನ ಸಂಚಾರ ಪ್ರಾರಂಭವಾಗಿದ್ದು, ಅಂಗಡಿ ಮುಂಗಟ್ಟುಗಳು ತೆರೆದಿವೆ. ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಬೆಳಗ್ಗೆ ಹನ್ನೊಂದು ಗಂಟೆಗೆ ಧಾರವಾಡದ ಕಡಪಾ ಮೈದಾನದಿಂದ ವಿವಿಧ ಕಾರ್ಮಿಕ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಲಿವೆ.