thumbnail

By

Published : Feb 6, 2021, 11:45 AM IST

ETV Bharat / Videos

ಕೃಷಿ ಕಾಯ್ದೆ ವಿರೋಧಿಸಿ ಪ್ರಧಾನಿಗೆ 'ರಕ್ತ ಪತ್ರ' ರವಾನಿಸಿದ ಕರ್ನಾಟಕ ಕಿಸಾನ್ ಕಾಂಗ್ರೆಸ್

ಕೃಷಿ ಕಾಯ್ದೆ ವಿರೋಧಿಸಿ ರೈತರ ರಕ್ತದಿಂದ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಪೋಸ್ಟ್ ಮಾಡಿದ್ದಾರೆ. ನಗರದ ರಾಜಭವನ ರಸ್ತೆಯಲ್ಲಿರುವ ಕೇಂದ್ರ ಪೋಸ್ಟ್ ಆಫೀಸ್​ನಲ್ಲಿ ಕೃಷಿ ಕಾಯ್ದೆ ವಿರೋಧಿಸಿ ಕಿಸಾನ್ ಕಾಂಗ್ರೆಸ್ ವತಿಯಿಂದ ಈ ಪ್ರತಿಭಟನೆ ನಡೆಸಲಾಯಿತು. ರೈತ ವಿರೋಧಿ ಮೂರು ಕಾಯ್ದೆಗಳನ್ನು ರದ್ದು ಮಾಡಬೇಕು. ರೈತರನ್ನು ಭಯೋತ್ಪಾದಕರೆಂದು ಹೇಳಿಕೆ ನೀಡುತ್ತಿರುವ ಕಂಗನಾ ರಣಾವತ್​ಗೆ ಒದಗಿಸಿರುವ ವೈ-ಪ್ಲಸ್ ಭದ್ರತೆಯನ್ನ ತಕ್ಷಣ ಹಿಂಪಡೆಯಬೇಕೆಂದು ಪತ್ರ ಬರೆದು, ರಕ್ತದಲ್ಲಿ ಸಹಿ ಹಾಕಿದ್ದಾರೆ. ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾದ ಸಚಿನ್ ಮಿಗಾ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. ಈ ಕುರಿತು ನಮ್ಮ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.