thumbnail

ಚಿಕ್ಕಮಗಳೂರಿನ ಕೆಲ ಭಾಗದಲ್ಲಿ ಬಸ್ ಸಂಚಾರ ಪುನಾರಂಭ..

By

Published : Dec 14, 2020, 12:59 PM IST

ಕೆಎಸ್ಆರ್​ಟಿಸಿ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿ ಕೆಎಸ್ಆರ್​ಟಿಸಿ ಸಿಬ್ಬಂದಿ ಕರೆ ನೀಡಿದ ಮುಷ್ಕರ ಇಂದಿಗೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ಮುಷ್ಕರಕ್ಕೆ ಚಿಕ್ಕಮಗಳೂರು ಕೆಎಸ್ಆರ್​ಟಿಸಿ ಸಿಬ್ಬಂದಿ ಬೆಂಬಲ ನೀಡಿದ್ರೂ ಇಂದು ಬೆಳಗ್ಗೆಯಿಂದ ಕೆಲ ಬಸ್​ಗಳು ರಸ್ತೆಗಿಳಿದಿವೆ. ಜಿಲ್ಲೆಯ ಕೆಲ ಭಾಗದಲ್ಲಿ ಬಸ್ ಸಂಚಾರ ಪ್ರಾರಂಭ ಮಾಡಿರುವುದರಿಂದ ಪ್ರಯಾಣಿಕರು ಬಸ್ ನಿಲ್ದಾಣಕ್ಕೆ ಬರುತ್ತಿದ್ದಾರೆ. ತಮ್ಮ ತಮ್ಮ ಊರಿಗೆ ಹೋಗಲು ಕಾತುರದಿಂದ ಕಾಯುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಈ ಮುಷ್ಕರದಿಂದ ಸಾಕಷ್ಟು ಜನರಿಗೆ ತೊಂದರೆಯಾಗುತ್ತಿದೆ. ನಿಧಾನವಾಗಿ ಬಸ್​ಗಳು ಸಂಚಾರ ಪ್ರಾರಂಭಿಸಿವೆ. ಈ ಕುರಿತು ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಲ್ಲಿ ನಡೆಸಿದ ಒಂದು ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.