ಮಾ. 26ರಂದು ಭಾರತ್ ಬಂದ್‌ಗೆ ಕರೆ: ಬೆಂಬಲಿಸುವಂತೆ ಬಡಗಲಪುರ ನಾಗೇಂದ್ರ ಮನವಿ

By

Published : Mar 24, 2021, 8:36 PM IST

thumbnail
ಬೆಂಗಳೂರು: ರೈತ ವಿರೋಧಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಮಾರ್ಚ್ 26ರಂದು ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಭಾರತ್ ಬಂದ್‌ಗೆ ಕರೆ ನೀಡಿದೆ. ದೆಹಲಿ ರೈತರನ್ನ ಬೆಂಬಲಿಸುವ ನಿಟ್ಟಿನಲ್ಲಿ ರಾಜ್ಯದಲ್ಲೂ ಬಂದ್​ಗೆ ಬೆಂಬಲ ನೀಡಲಾಗುತ್ತಿದೆ.‌ ರೈತ ಮುಖಂಡರು, ರಾಜ್ಯದ ಎಲ್ಲಾ ನಾಗರಿಕರು ಬಂದ್​ಗೆ ಬೆಂಬಲ ಸೂಚಿಸುವಂತೆ ಮನವಿ ಮಾಡಲಾಗಿದೆ. ಈ ಕುರಿತು‌ ಮಾತನಾಡಿದ ರೈತ ಮುಖಂಡ ಬಡಗಲಪುರ ನಾಗೇಂದ್ರ, ಮಾರ್ಚ್ 26ಕ್ಕೆ ದೆಹಲಿ ಸುತ್ತಮುತ್ತ ರೈತರ ಚಳುವಳಿ ಆರಂಭವಾಗಿ 4 ತಿಂಗಳು ಕಳೆಯುತ್ತೆ. ಆದ್ರೆ ಕೇಂದ್ರ ಸರ್ಕಾರ ಮಾತ್ರ ರೈತರ ಹೋರಾಟಕ್ಕೆ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಸಂಯುಕ್ತ ಕಿಸಾನ್ ಮೋರ್ಚಾ ಭಾರತದಾದ್ಯಂತ ಬಂದ್​ಗೆ ಕರೆ ನೀಡಿದೆ. ಈ ಹಿನ್ನೆಲೆ ರಾಜ್ಯದ ಎಲ್ಲಾ ನಾಗರಿಕರು ಬಂದ್​ಗೆ ಬೆಂಬಲ ಸೂಚಿಸಬೇಕು. ಜೊತೆಗೆ ವ್ಯಪಾರಸ್ಥರು, ಕಾರ್ಮಿಕರು, ಆಟೋ ಚಾಲಕರು ಸೇರಿದಂತೆ ಎಲ್ಲಾ ಉದ್ದಿಮೆಗಳು ಸ್ವಯಂಪ್ರೇರಿತರಾಗಿ ಬಂದ್​ಗೆ ಬೆಂಬಲ ಸೂಚಿಸಬೇಕು. ಬೆಂಬಲ ಸೂಚಿಸುವ ಮೂಲಕ ಅನ್ನದಾತರಿಗೆ ಒತ್ತಾಸೆಯಾಗಿ ನಿಲ್ಲಬೇಕು ಎಂದು ಮನವಿ ಮಾಡಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.