ಮರದ ಅಂಬಾರಿ ತಾಲೀಮು ಆರಂಭಿಸಿದ ಕ್ಯಾಪ್ಟನ್ ಅಭಿಮನ್ಯು

By

Published : Oct 18, 2020, 10:49 AM IST

thumbnail

ಮೈಸೂರು: ಜಂಬೂಸವಾರಿ ಮೆರವಣಿಗೆಗೆ ದಿನಗಣನೆ ಆರಂಭವಾಗುತ್ತಿರುವುದರಿಂದ ಗಜಪಡೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಮರದ ಅಂಬಾರಿ ತಾಲೀಮು ನಡೆಸಲಾಯಿತು. ಮರದ ಅಂಬಾರಿಗೆ ಅರಮನೆಯ ಪುರೋಹಿತರಿಂದ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿದ ನಂತರ, ಸಿಬ್ಬಂದಿಗಳಿಂದ ಮರದ ಅಂಬಾರಿ ಕಟ್ಟುವ ಕಾರ್ಯ ನಡೆಯಿತು. ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ 9 ದಿನಗಳು ಮಾತ್ರ ಬಾಕಿ ಇರುವುದರಿಂದ ಗಜಪಡೆಯ ತಾಲೀಮು ಮತ್ತಷ್ಟು ಚುರುಕುಗೊಂಡಿದೆ. ಅಭಿಮನ್ಯುಗೆ ಕುಮ್ಕಿ ಆನೆಗಳಾದ ಕಾವೇರಿ ಹಾಗೂ ವಿಜಯ, ವಿಕ್ರಮ, ಗೋಪಿ ಸಾಥ್ ನೀಡಿದವು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.