ಡಿಕೆಶಿಗೆ ಒಲಿದ ಕೆಪಿಸಿಸಿ ಅಧ್ಯಕ್ಷ ಪಟ್ಟ: ಹಾವೇರಿಯಲ್ಲಿ ಕೈ ಕಾರ್ಯರ್ತರ ಸಂಭ್ರಮಾಚರಣೆ
ಹಾವೇರಿ: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಮತ್ತು ಕಾರ್ಯಧ್ಯಾಕ್ಷರಾಗಿ ಸಲೀಂ ಅಹ್ಮದ್ ಆಯ್ಕೆಯಾಗಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸೇರಿದ ಕೈ ಕಾರ್ಯಕರ್ತರು, ಸಿಹಿ ಹಂಚಿ ಪಟಾಕಿ ಸಿಡಿಸಿ, ಜೈಕಾರ ಕೂಗುವ ಮೂಲಕ ಸಂತಸ ವ್ಯಕ್ತಪಡಿಸಿದರು.