ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ: ಮತದಾನದ ವೇಳೆ ಸಾಮಾಜಿಕ ಅಂತರ ನಿಯಮ ಉಲ್ಲಂಘನೆ

By

Published : Oct 28, 2020, 1:22 PM IST

thumbnail
ಚಿತ್ರದುರ್ಗ: ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು‌ ಜಿಲ್ಲೆಗಳಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಆಗ್ನೇಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಲ್ಲಿ ಪ್ರಜ್ಞಾವಂತ ಮತದಾರರು ನಿರ್ಲಕ್ಷ್ಯ ವಹಿಸಿದರು. ಚಿತ್ರದುರ್ಗದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮತಗಟ್ಟೆಯಲ್ಲಿ ಮತದಾನಕ್ಕೂ ಮುನ್ನ ವೋಟರ್​ ಲಿಸ್ಟ್​ನಲ್ಲಿ ತಮ್ಮ ಹೆಸರು ಹುಡುಕುವ ಭರದಲ್ಲಿ ಪದವೀಧರರಲ್ಲಿ ಸಾಮಾಜಿಕ ಅಂತರ ಮರೆಯಾಗಿದ್ದು ಕಂಡುಬಂತು. ಬಳಿಕ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ‌. ರಾಧಿಕಾ ಸ್ಥಳಕ್ಕೆ ಭೇಟಿ ನೀಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ ಮಾಡಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.