ಪಾಲಿಕೆ ಚುನಾವಣೆ: ಮಂಗಳೂರಲ್ಲಿ ಕಟೀಲ್ ಬಿರುಸಿನ ಪ್ರಚಾರ - ಮಂಗಳೂರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಚಾರ
🎬 Watch Now: Feature Video
ಮಂಗಳೂರು: ಮಹಾನಗರ ಪಾಲಿಕೆ ಚುನಾವಣಾ ಕಣ ರಂಗೇರಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಕೋಡಿಕಲ್ ಎಸ್ಎನ್ಡಿಪಿ ಮಂದಿರದಲ್ಲಿ ರೋಡ್ ಶೋ ನಡೆಸಿ, ಬಳಿಕ ಹೊಸಬೆಟ್ಟು, ಬೈಕಂಪಾಡಿ, ಕಾನ, ವಾಮಂಜೂರು ಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದರು. ಈ ವೇಳೆ ಮಾತನಾಡಿದ ಅವರು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಪರ ಅಲೆಯಿದೆ. ಕಾಂಗ್ರೆಸ್ ಅನ್ನು ಓಡಿಸಬೇಕೆಂದು ಜನರು ನಿರ್ಧರಿಸಿದ್ದು, ಪಾಲಿಕೆಯಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.