thumbnail

By

Published : Mar 4, 2021, 7:34 PM IST

ETV Bharat / Videos

ಈ ದೇಶದ ಪ್ರಧಾನಿಯೇ RSS​ನವರು, ಆ ಬಗ್ಗೆ ಮಾತನಾಡುವ ನೈತಿಕತೆ ನಿಮಗಿಲ್ಲ: ಸದನದಲ್ಲಿ ಸಿಎಂ ಗರಂ

ಒಂದು ದೇಶ-ಒಂದು ಚುನಾವಣೆ ಕುರಿತು ಚರ್ಚೆ ನಡೆಸಲು ಅವಕಾಶ ನೀಡಬಾರದು ಎಂದು ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಧರಣಿ ನಡೆಸಿದರು. ಈ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಸಿಎಂ ಬಿಎಸ್​ವೈ, ದೇಶದ ಪ್ರಧಾನಿನೇ ಆರ್​ಎಸ್​ಎಸ್​ನವರು, ಗೊತ್ತಾ ನಿಮಗೆ?, ನಿಮ್ಮ ಕಥೆ ಇದಕ್ಕೆ ಹೀಗೆ ಆಗಿದೆ. ಇಡೀ ದೇಶದಲ್ಲಿ ನೀವು ನೆಲಕಚ್ಚಿ ಹೋಗಿದ್ದೀರಿ. ಇಲ್ಲೇನೋ 55 ಜನ ಇದ್ದು ಕೂಗಾಡುತ್ತಿದ್ದೀರಿ. ಆರ್​ಎಸ್​ಎಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕೇನಿದೆ ನಿಮಗೆ? ಎಂದು ಪ್ರಶ್ನಿಸಿದರು. ಒಂದು ರಾಷ್ಟ್ರ, ಒಂದು ಚುನಾವಣೆ ಚರ್ಚೆ ಬಗ್ಗೆ ವಿಧಾನಸಭೆ ಕಲಾಪದಲ್ಲಿ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಆರ್​​ಎಸ್ಎಸ್​ ಅಜೆಂಡಾ ಆಗಿದೆ ಎಂದು ಆರೋಪಿಸಿದರು. ಇನ್ನು ಭದ್ರಾವತಿಯ ಕಾಂಗ್ರೆಸ್​ ಶಾಸಕ ಸಂಗಮೇಶ್​ ಸದನದಲ್ಲಿ ಶರ್ಟ್​​ ಬಿಚ್ಚಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಅವರನ್ನು ಸ್ಪೀಕರ್ ಒಂದು ವಾರಗಳ ಕಾಲ ಸದನದಿಂದ ಅಮಾನತು ಮಾಡಿದ್ದಾರೆ. ಇದನ್ನು ವಿರೋಧಿಸಿ ಸದನದ ಬಾವಿಗಿಳಿದು ಕೈ ಸದಸ್ಯರು ಪ್ರತಿಭಟನೆ ನಡೆಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.