ಸುಳ್ಳು ಭರವಸೆಗಳ ಮೂಲಕ ಬಿಜೆಪಿ ಪ್ರಚಾರ: ಕಾಂಗ್ರೆಸ್ ಅಭ್ಯರ್ಥಿ ಟಿ ಬಿ ಜಯಚಂದ್ರ ಆರೋಪ - congresss candidate tb jayachandra
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8869072-thumbnail-3x2-tumkur.jpg)
ತುಮಕೂರು: ಉಪಚುನಾವಣೆ ಹಿನ್ನೆಲೆ, ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಕೆಲವು ಯೋಜನೆಗಳನ್ನು ಅನುಷ್ಠಾನಗೊಳಿಸುವುದಾಗಿ ಬಿಜೆಪಿ ಹೇಳುತ್ತಿದೆ. ಅವೆಲ್ಲವೂ ಕೇವಲ ಆಡಳಿತಾತ್ಮಕ ನಿರ್ಧಾರ ಮಾತ್ರ. ಆದರೆ ಆರ್ಥಿಕ ಇಲಾಖೆಯ ಅನುಮತಿ ದೊರೆತಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಟಿ ಬಿ ಜಯಚಂದ್ರ ಹೇಳಿದ್ದಾರೆ. ಉಪಚುನಾವಣೆ ಹಿನ್ನೆಲೆ 'ಈಟಿವಿ ಭಾರತ'ದೊಂದಿಗೆ ಮಾತನಾಡಿದ ಅವರು, ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ರೀತಿಯ ಮಾಹಿತಿ ಇಲ್ಲದೆ ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಬಿಜೆಪಿ ಸಕ್ರಿಯವಾಗಿದೆ. ಇದು ಕ್ಷೇತ್ರದ ಜನರಿಗೆ ಸ್ಪಷ್ಟವಾಗಿ ಮನವರಿಕೆಯಾಗುತ್ತಿದೆ ಎಂದಿದ್ದಾರೆ.