ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಶಿವಾನಂದ ಬೆಂತೂರು
ಪೌರಾಡಳಿತ ಸಚಿವರಾಗಿದ್ದ ಕಾಂಗ್ರೆಸ್ನ ಸಿ.ಎಸ್.ಶಿವಳ್ಳಿ ಅವರ ಅಕಾಲಿಕ ನಿಧನದಿಂದ ತೆರವಾದ ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ ಅವರ ಪತ್ನಿ ಕುಸುಮಾ ಶಿವಳ್ಳಿ ಈಗಾಗಲೇ ನಾಪಪತ್ರ ಸಲ್ಲಿಸಿದ್ದಾರೆ. ಇನ್ನು ಹೈಕಮಾಂಡ್ ನಡೆ ಮತ್ತು ಟಿಕೆಟ್ ಕೈ ತಪ್ಪಿದ್ದರಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಶಿವಾನಂದ ಬೆಂತೂರು ಅವರು ಸಹ ತಮ್ಮ ಕಾರ್ಯಕರ್ತರೊಂದಿಗೆ ಆಗಮಿಸಿ ಇಂದು ನಾಮಪತ್ರ ಸಲ್ಲಿಸಿ ಸವಾಲು ಹಾಕಿದ್ದಾರೆ.