ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಚೆಕ್ಪೋಸ್ಟ್ ಕಾಣಿಸುತ್ತಿಲ್ಲವೇಕೆ? - ಕರ್ನಾಟಕ ಮಹಾರಾಷ್ಟ್ರ ಮಧ್ಯೆ ವಾಹನಗಳ ಸಂಚಾರವಿದ್ದು ಜನರಲ್ಲಿ ಆತಂಕ ಎದುರಾಗಿದೆ.
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6569580-460-6569580-1585371482216.jpg)
ಚಿಕ್ಕೋಡಿ ತಾಲೂಕಿನ ದಾನವಾಡ - ದತ್ತವಾಡ ಮಧ್ಯೆ ಸಂಪರ್ಕ ಕಲ್ಪಿಸುವ ಸೇತುವೆ ಬಳಿ ಚೆಕ್ಪೋಸ್ಟ್ ಇಲ್ಲ. ಯಾವುದೇ ಆರೋಗ್ಯ ಇಲಾಖೆ ಸಿಬ್ಬಂದಿಯನ್ನೂ ಸಹ ಇಲ್ಲಿ ನಿಯೋಜನೆ ಮಾಡಿಲ್ಲ. ರಾಜಾರೋಷವಾಗಿ ಕರ್ನಾಟಕ ಮಹಾರಾಷ್ಟ್ರ ಮಧ್ಯೆ ವಾಹನಗಳ ಸಂಚಾರವಿದ್ದು ಜನರಲ್ಲಿ ಆತಂಕ ಎದುರಾಗಿದೆ. ಮಹಾರಾಷ್ಟ್ರದಲ್ಲಿ ದಿನೇದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ.