thumbnail

ಉಚಿತ ಅಕ್ಕಿ- ಗೋಧಿ ಸ್ಥಗಿತ ವಿಚಾರ: ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದ ಸಚಿವೆ ಜೊಲ್ಲೆ ಹೇಳಿದ್ದೇನು?

By

Published : Feb 5, 2020, 7:42 PM IST

ತುಮಕೂರು: ಸಿದ್ಧಗಂಗಾ ಮಠಕ್ಕೆ ಸೇರಿದಂತೆ ಹಲವು ಸಂಘ ಸಂಸ್ಥೆಗಳಿಗೆ ಉಚಿತವಾಗಿ ಅಕ್ಕಿ ಮತ್ತು ಗೋಧಿ ಸ್ಥಗಿತಗೊಳಿಸಿರುವ ಕುರಿತಂತೆ ವಿವಿಧ ಮಠಾಧೀಶರಿಂದ ಡಿಸೆಂಬರ್ 12ರಂದು ಪತ್ರ ಬಂದಿತ್ತು. ಸರ್ಕಾರ ಅದನ್ನು ಪರಿಶೀಲನೆ ನಡೆಸುತ್ತಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಅವರು ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಸಿದ್ಧಲಿಂಗ ಸ್ವಾಮೀಜಿ ಅವರೊಂದಿಗೆ ಮಾತುಕತೆ ನಡೆಸಿದ್ರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಕುರಿತಂತೆ ಎಲ್ಲಾ ಪತ್ರವ್ಯವಹಾರವನ್ನು ಪೂರ್ಣಗೊಳಿಸಿದ್ದೆ, ಅಲ್ಲದೆ ಅದಕ್ಕೆ ಅನುಮೋದನೆ ನೀಡುವುದು ಸ್ವಲ್ಪ ತಡವಾಗಿತ್ತು. ಅಷ್ಟರೊಳಗೆ ಮಾಜಿ ಸಚಿವ ಯು.ಟಿ. ಖಾದರ್ ಈ ಕುರಿತಂತೆ ಪ್ರಸ್ತಾಪ ಮಾಡಿದ್ದಾರೆ. ಮುಖ್ಯಮಂತ್ರಿ ಅವರ ಗಮನಕ್ಕೆ ಬಂದ ತಕ್ಷಣ 18 ಕೋಟಿ ರೂ. ವೆಚ್ಚವಾಗಲಿದೆ ಎಂದು ತಿಳಿಸಿ, ನಂತರ ಅನುಮೋದನೆ ನೀಡಿದ್ದಾರೆ ಎಂದು ಸಚಿವೆ ಜೊಲ್ಲೆ ಮಾಹಿತಿ ನೀಡಿದ್ರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.