thumbnail

By

Published : Jul 20, 2020, 3:46 PM IST

ETV Bharat / Videos

ಹುಬ್ಬಳ್ಳಿಯ ಕೋವಿಡ್ ಸೆಂಟರ್​ನಲ್ಲಿ ಮಹಿಳೆಯ ಸಖತ್​ ನೃತ್ಯ... ವಿಡಿಯೋ ನೋಡಿ

ಹುಬ್ಬಳ್ಳಿ: ಕೊರೊನಾ ಸೋಂಕಿತರಲ್ಲಿ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಧಾರವಾಡ ಜಿಲ್ಲೆಯ ಕೋವಿಡ್ ಸೆಂಟರ್​ಗಳಲ್ಲಿ ಮನರಂಜನೆ ಹಾಗೂ‌ ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಇಲ್ಲಿನ ಘಂಟಿಕೇರಿಯ ಬಿಸಿಎಂ ಹಾಸ್ಟೆಲ್ ಕೋವಿಡ್ ಕೇರ್ ಸೆಂಟರ್​​ನಲ್ಲಿಂದು ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಎನ್ ಆರ್ ಪುರುಷೋತ್ತಮ ಹಾಗೂ ನೋಡಲ್ ಅಧಿಕಾರಿ ಡಾ.ಸಂಪತ್ ಸಿಂಗ್ ನೇತೃತ್ವದಲ್ಲಿ ಶಟಲ್ ಬ್ಯಾಡ್ಮಿಂಟನ್ ಆಟ ಆಡಿಸಿ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಿದರು. ಇದೇ ಸಂದರ್ಭದಲ್ಲಿ ಮಹಿಳೆಯೊಬ್ಬರು ಡಾ.ರಾಜ್​ಕುಮಾರ್​ ಅವರ ಅಭಿನಯದ ಹಾಗೂ ಹುಬ್ಬಳ್ಳಿಯಲ್ಲಿ ಚಿತ್ರೀಕರಣಗೊಂಡ "ಹುಟ್ಟಿದರೇ ಕನ್ನಡನಾಡಲ್ಲಿ ಹುಟ್ಟಬೇಕು" ಎಂಬ ಹಾಡಿಗೆ ಹೆಜ್ಜೆ ಹಾಕಿ ಎಲ್ಲರನ್ನೂ ರಂಜಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.