ಕಾರವಾರದಲ್ಲಿ ಅರಣ್ಯ ಹುತಾತ್ಮರ ಸ್ಮರಣೆ: ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದ ಡಿಸಿ
ಕಾರವಾರ: ಕರ್ತವ್ಯದಲ್ಲಿದ್ದಾಗ ಹುತಾತ್ಮರಾದ ಅರಣ್ಯ ಇಲಾಖೆ ಸಿಬ್ಬಂದಿ ಸ್ಮರಣೆಗಾಗಿ ಅರಣ್ಯ ಹುತಾತ್ಮ ದಿನಾಚರಣೆಯನ್ನು ಕಾರವಾರದಲ್ಲಿ ಇಂದು ಆಚರಿಸಲಾಯಿತು. ನಗರದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿ ಡಾ. ಕೆ. ಹರೀಶ್ಕುಮಾರ್ ಅರಣ್ಯ ಹುತಾತ್ಮರಿಗೆ ಪುಷ್ಪಗಳನ್ನು ಅರ್ಪಿಸಿ ಗೌರವ ಸಲ್ಲಿಸಿದರು.