ಜಾರಕಿಹೊಳಿ ವಿರುದ್ಧದ ಸಿಡಿ ಕೇಸ್ ವಾಪಸ್: ಮೊದಲ ಪ್ರತಿಕ್ರಿಯೆ ನೀಡಿದ ದಿನೇಶ್ ಕಲ್ಲಹಳ್ಳಿ! - ಕಲ್ಲಹಳ್ಳಿ ದೂರು ವಾಪಸ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10950791-thumbnail-3x2-wdfdfdfd.jpg)
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾಗಿರುವ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದ ದಿನೇಶ್ ಕಲ್ಲಹಳ್ಳಿ ಇದೀಗ ಪ್ರಕರಣ ವಾಪಸ್ ಪಡೆದುಕೊಂಡಿದ್ದು, ಆ ವಿಚಾರವಾಗಿ ಮೊದಲ ಬಾರಿಗೆ ಮಾತನಾಡಿದ್ದಾರೆ. ನಾನು ಐದು ಪುಟಗಳಲ್ಲಿ ದೂರು ವಾಪಸ್ ಪಡೆಯಲು ಹಲವಾರು ಕಾರಣಗಳನ್ನು ನೀಡಿದ್ದೇನೆ. ಈ ಬಗ್ಗೆ ವಿಚಾರಣೆಗೆ ಕರೆದರೆ ಮತ್ತೆ ಠಾಣೆಗೆ ಕಾನೂನಾತ್ಮಕವಾಗಿ ಹೋಗುತ್ತೇನೆ. ಸುಮೊಟೊ ಕೇಸ್ ದಾಖಲು ವಿಚಾರ ತನಿಖಾಧಿಕಾರಿಗೆ ಬಿಟ್ಟಿದ್ದು. ಯಾವುದೇ ರಾಜಕಾರಣಕ್ಕೆ ಸೇರಿಕೊಳ್ಳುವ ಇಚ್ಛೆ ನನಗಿಲ್ಲ. ಯಾವುದೇ ಒತ್ತಡಗಳಿಗೆ ಮಣಿದಿಲ್ಲ ಎಂದರು.