ಸಾರ್ವಜನಿಕ ಸಮಾರಂಭದಲ್ಲಿ ಮಾಜಿ ಸಚಿವ ಬೆಳ್ಳುಬ್ಬಿ ಗಾಯನ
ಮುದ್ದೇಬಿಹಾಳ : ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವಿಶೇಷತೆ ಗಮನ ಸೆಳೆದಿದ್ದಾರೆ. ತಾಲೂಕಿನ ಅಡವಿ ಹುಲಗಬಾಳ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡ ಬೀರಲಿಂಗೇಶ್ವರ, ಮಾಳಿಂಗರಾಯ ಹಾಗೂ ಸಿಡಿಯಾನ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸರ್ವಧರ್ಮ ಸಮ್ಮೇಳನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬೆಳ್ಳುಬ್ಬಿ, ತಮ್ಮ ಎಂದಿನ ಜಾನಪದ ಶೈಲಿಯಲ್ಲಿ ಹಾಡುವ ಮೂಲಕ ನೆರೆದ ಜನರ ಮನದಲ್ಲಿ ಉತ್ಸಾಹ ಮೂಡಿಸಿದರು.