thumbnail

ಬೆಳೆ ವಿಮೆ ಪಾವತಿಸಿದರೂ ಪರಿಹಾರ ನೀಡದ ಸರ್ಕಾರ: ಅನ್ನದಾತರ ಪ್ರತಿಭಟನೆ

By

Published : Oct 14, 2019, 9:55 PM IST

2018-19 ನೇ ಸಾಲಿನ ಬೆಳೆ ವಿಮೆ ಪಾವತಿಸಿದರೂ, ಸರ್ಕಾರ ಈವರೆಗೂ ಬೆಳೆ ವಿಮೆ ಪರಿಹಾರ ಹಣ ಬಿಡುಗಡೆ ಮಾಡಿಲ್ಲ. ಶೀಘ್ರವೇ ಈ ಪರಿಹಾರದ ಹಣ ಬಿಡುಗಡೆ ಮಾಡಬೇಕೆಂದು ಗದಗದಲ್ಲಿ ರೈತರು ಪ್ರತಿಭಟನೆ ನಡೆಸಿದರು. ಟಿಪ್ಪು ಸುಲ್ತಾನ್​ ಸರ್ಕಲ್​ನಿಂದ ಜಿಲ್ಲಾಧಿಕಾರಿ ಕಚೇರಿಗೆ ತರೆಳಿದ ರೈತರು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಜಿಲ್ಲೆಯ ರೋಣ ತಾಲೂಕಿನ ಬಹುತೇಕ ರೈತರಿಗೆ ಇನ್ನೂ ಬೆಳೆ ವಿಮೆ ಪರಿಹಾರದ ಮೊತ್ತ ಸಿಕ್ಕಿಲ್ಲ. ಇದರಿಂದಾಗಿ ರೈತರಿಗೆ ಅನ್ಯಾಯವಾಗಿದೆ. ಕಳೆದ ಬಾರಿ ಮಳೆ ಇಲ್ಲದೆ ಈ ಭಾಗದ ರೈತರು ಕಂಗಾಲಾಗಿದ್ದರು. ಆದರೆ ಈ ಬಾರಿ ಅತಿವೃಷ್ಟಿಯಾಗಿ ನಮ್ಮ ಭಾಗದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಅವರಿಗೆ ನ್ಯಾಯ ಸಿಗುವಂತಾಗಲಿ ಎಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ನೀಡಿದರು‌.‌

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.