ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಹಾವೇರಿಯಲ್ಲಿ ಪ್ರತಿಭಟನೆ

By

Published : Dec 2, 2020, 2:50 PM IST

thumbnail
ಹಾವೇರಿ: ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ನೀತಿ ಖಂಡಿಸಿ ನಗರದ ಹೊರವಲಯದಲ್ಲಿ ಕೋಡಿಹಳ್ಳಿ ಚಂದ್ರಶೇಖರ ಬಣದ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪೂನಾ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಕಾರ್ಯಕ್ರರ್ತರು, ಬಾಯಿ ಬಡಿದುಕೊಂಡು, ಬಾರಕೋಲು ಬೀಸಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ, ಪೊಲೀಸರು ಪ್ರತಿಭಟನೆ ನಡೆಸುತ್ತಿದ್ದ ಹದಿನೈದಕ್ಕೂ ಅಧಿಕ ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು. ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದರಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.