ಶಿವಮೊಗ್ಗ: ವಿದ್ಯುತ್ ತಂತಿ ತಗುಲಿ ಹುಲ್ಲು ತುಂಬಿದ್ದ ಲಾರಿಗೆ ಬೆಂಕಿ - ಶಿವಮೊಗ್ಗ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10037087-thumbnail-3x2-net.jpg)
ಚಲಿಸುತ್ತಿದ್ದ ವೇಳೆ ಹುಲ್ಲು ತುಂಬಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಹುಲ್ಲು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಆನಂದಪುರಂ ಬಳಿ ನಡೆದಿದೆ. ಸಾಗರದಿಂದ ದಕ್ಷಿಣ ಕನ್ನಡ ಜಿಲ್ಲೆಯ ಅದ್ಯಾರು ಕಪಿಲ ಗೋ ಶಾಲೆಗೆ ತೆರಳುತ್ತಿದ್ದ ಹುಲ್ಲಿನ ಲಾರಿಗೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿದೆ. ಪರಿಣಾಮ ಲಾರಿಯಲ್ಲಿದ್ದ ಹುಲ್ಲು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಬೆಂಕಿ ತಗುಲುತ್ತಿದ್ದಂತೆಯೇ ಸ್ಥಳೀಯರು ಹರಸಾಹಸ ಪಟ್ಟು ಬೆಂಕಿಯನ್ನು ನಂದಿಸಿದ್ದು, ಬಳಿಕ ಸಾಗರದಿಂದ ಅಗ್ನಿಶಾಮಕ ದಳ ಆಗಮಿಸಿದೆ. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.