ಬಿಜೆಪಿ ಕಚೇರಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ
ಬೆಂಗಳೂರು: ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಸಮರ್ಪಣ ದಿನದ ಅಂಗವಾಗಿ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಉಚಿತ ನೇತ್ರ, ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ನಡೆಸಲಾಯಿತು. ರಾಜ್ಯ ಬಿಜೆಪಿ ವೈದ್ಯಕೀಯ ಪ್ರಕೋಷ್ಠ, ಡಾ.ಸೋಲಂಕಿ ಕಣ್ಣಿನ ಆಸ್ಪತ್ರೆ, ಶೇಷಾದ್ರಿಪುರಂ ಅಪೊಲೋ ಆಸ್ಪತ್ರೆ, ಅಕ್ಷಯ ವಾಲೆಂಟರಿ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ಶಿಬಿರ ನಡೆಸಲಾಯಿತು. ಕಾರ್ಯಾಲಯದ ಸಿಬ್ಬಂದಿ, ಕಾರ್ಯಕರ್ತರು, ಸಾರ್ವಜನಿಕರು, ಪೌರ ಕಾರ್ಮಿಕರು ಉಚಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಜೊತೆಗೆ ರಕ್ತದಾನ ಮಾಡಿದರು.
Last Updated : Feb 11, 2020, 12:31 PM IST