thumbnail

By

Published : Jan 24, 2021, 5:03 PM IST

ETV Bharat / Videos

ರಾಮ ಮಂದಿರ ನಿರ್ಮಾಣಕ್ಕಾಗಿ ನಿಧಿ ಸಮರ್ಪಣಾ ಮಹಾ ಅಭಿಯಾನ: ಮನೋಹರ ಮಠದ

ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ನಿಧಿ ಸಮರ್ಪಣಾ ಮಹಾ ಅಭಿಯಾನ‌ ಶುರುವಾಗಿದ್ದು, ಪ್ರತಿಯೊಂದು ಮನೆಗೆ ನಮ್ಮ ಕಾರ್ಯಕರ್ತರು ತಲುಪುತ್ತಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ತಿನ ಸಹ ಸಂಘಟನಾ ಕಾರ್ಯದರ್ಶಿ ಮನೋಹರ ಮಠದ ಹೇಳಿದರು. ನಗರದ ಮೀಡಿಯಾ ಕ್ಲಬ್​​ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಅತ್ಯಂತ ವಿಶಿಷ್ಟವಾಗಿ ಶ್ರೀರಾಮ ಮಂದಿರ ನಿರ್ಮಾಣವಾಗಲಿದೆ. ಮಂದಿರ ನಿರ್ಮಾಣಕ್ಕೆ ಬೇಕಾದ ಹಣವನ್ನು ದೇಶದಾದ್ಯಂತ ಸಾರ್ವಜನಿಕರಿಂದ ಸಂಗ್ರಹಿಸಲಾಗುತ್ತಿದೆ. ಈ ನಿಧಿ ಅಭಿಯಾನ ಫೆ.5 ರವರೆಗೆ ನಡೆಯಲಿದೆ. ಹೀಗಾಗಿ ಸಾರ್ವಜನಿಕರು ತಮ್ಮ ಭಕ್ತಿ ಹಾಗೂ ಶಕ್ತಿಗನುಸಾರವಾಗಿ ದೇಣಿಗೆ ಸಮರ್ಪಿಸುವಂತೆ ಮನೋಹರ ಮಠದ ಮನವಿ ಮಾಡಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.