ಸೇವೆ ಖಾಯಂಗೊಳಿಸುವಂತೆ ಅತಿಥಿ ಉಪನ್ಯಾಸಕರ ಆಗ್ರಹ
ರಾಯಚೂರು: ಸೇವೆ ಖಾಯಂಗೊಳಿಸುವಂತೆ ಒತ್ತಾಯಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು. ಸರ್ಕಾರವು ಸರ್ಕಾರಿ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಮುಂದಾಗಿದೆ. ಆದ್ರೆ ಹಲವು ವರ್ಷಗಳಿಂದ ಅತಿಥಿ ಉಪನ್ಯಾಸಕರು ಪದವಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಸೇವೆಯನ್ನ ಪರಿಗಣಿಸಿ, ಅತಿಥಿ ಉಪನ್ಯಾಸಕರನ್ನು ವಿಲೀನಗೊಳಿಸಿ, ಸೇವೆಯನ್ನ ಖಾಯಂಗೊಳಿಸುವಂತೆ ಒತ್ತಾಯಿಸಿದ್ರು. ಜೊತೆಗೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯನ್ನು ವಿರೋಧಿಸಿದರು.