thumbnail

By

Published : Jun 13, 2020, 8:46 PM IST

ETV Bharat / Videos

ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಪರದಾಡಿದ ವಾಹನ ಸವಾರರು

ಬೆಂಗಳೂರು: ನಗರದ ವಿವಿಧೆಡೆ ಗಾಳಿ ಸಹಿತ ಜೋರು ಮಳೆ ಸುರಿದಿದೆ. ಮುಂಜಾನೆಯಿಂದಲೂ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ವೇಳೆ ಮಳೆಯಾಗಿದೆ. ಯಶವಂತಪುರ, ಜಯನಗರ, ಮೆಜೆಸ್ಟಿಕ್, ಕೋರಮಂಗಲ, ಹೆಬ್ಬಾಳ, ಶಿವಾಜಿನಗರ, ರಾಜಾಜಿನಗರ ಸೇರಿದಂತೆ ವಿವಿಧೆಡೆ ಮಳೆಯಾಗಿದೆ. ಮಳೆಯಿಂದ ವಾಹನ ಸವಾರರು ಸೇತುವೆಗಳ ಕೆಳಗೆ ಆಶ್ರಯ ಪಡೆದ ದೃಶ್ಯ ಕಂಡು ಬಂದಿತು. ವಾಯುಭಾರ ಕುಸಿತದ ಪರಿಣಾಮ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುಮ್ಸೂಚನೆ ನೀಡಿತ್ತು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.