ಚಿಕ್ಕಮಗಳೂರು ಜಿಲ್ಲಾದ್ಯಂತ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ - ಚಿಕ್ಕಮಗಳೂರು
🎬 Watch Now: Feature Video

ಚಿಕ್ಕಮಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಬಿಡುವು ನೀಡಿದ್ದ ಮಳೆ, ಇಂದು ಮತ್ತೆ ಧಾರಾಕಾರವಾಗಿ ಸುರಿಯಲು ಆರಂಭಿಸಿದೆ. ಜಿಲ್ಲೆಯ ಮೂಡಿಗೆರೆ, ಕೊಟ್ಟಿಗೆಹಾರ, ಬಣಕಲ್, ಚಾರ್ಮಾಡಿ ಘಾಟಿ, ಬಾಳೆಹೊನ್ನೂರು, ಜಯಪುರ, ಕೊಪ್ಪ, ಎನ್ಆರ್ ಪುರ, ಶೃಂಗೇರಿಯಲ್ಲಿ ಇಂದು ಬೆಳಗ್ಗಿನಿಂದಲೇ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕಳೆದ ಮೂರು ದಿನಗಳಿಂದ ಮಳೆ ಬಿಡುವು ನೀಡಿದ್ದರಿಂದ ನದಿಗಳ ಹರಿವಿನ ಮಟ್ಟ ಕೊಂಚ ಕಡಿಮೆಯಾಗಿದೆ. ಈ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ.