ಹಾವೇರಿ ಜಿಲ್ಲೆಯಲ್ಲೂ ನಿರಂತರ ಮಳೆ: ಸೇತುವೆಗಳು ಜಲಾವೃತ

By

Published : Aug 6, 2020, 9:28 AM IST

thumbnail
ಹಾವೇರಿ‌ ಜಿಲ್ಲಾದ್ಯಂತ ಎರಡು ದಿನಗಳಿಂದ ಮಳೆರಾಯ ಆರ್ಭಟಿಸುತ್ತಿದ್ದಾನೆ. ಸುರಿಯುತ್ತಿರೋ‌ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ವರದಾ, ತುಂಗಭದ್ರಾ, ಧರ್ಮಾ ನದಿಗಳ ಜಲಾನಯನ ಪ್ರದೇಶದಲ್ಲಿ ಸಹ ಮಳೆಯಾಗುತ್ತಿದ್ದು, ನದಿಗಳು ಮೈದುಂಬಿ ಹರಿಯಲಾರಂಭಿಸಿವೆ. ತಾಲೂಕಿನ ನಾಗನೂರು ಮತ್ತು ಸವಣೂರು ತಾಲೂಕಿನ ಕಳಸೂರು ಬ್ರಿಡ್ಜ್ ಗಳು ಜಲಾವೃತಗೊಂಡಿವೆ. ಬ್ರಿಡ್ಜ್​​ಗಳ ಮೇಲೆ ತುಂಬಿ ಹರಿತಿರೋ ನೀರಿನಿಂದಾಗಿ ನಾಗನೂರು - ಕೂಡಲ, ಕಳಸೂರು-ದೇವಗಿರಿ ಸಂಪರ್ಕ ಕಡಿತಗೊಂಡಿದೆ. ನದಿ ಪಾತ್ರದ ಜನರಲ್ಲಿ ಆತಂಕ ಮನೆ ಮಾಡಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.