ಹುಣಸೂರು ಉಪ ಕಣ: ಎರಡನೇ ಸುತ್ತಿನಲ್ಲೂ ಕಾಂಗ್ರೆಸ್​​ ಅಭ್ಯರ್ಥಿಗೆ ಮುನ್ನಡೆ - ಹುಣಸೂರು ಉಪ ಚುನಾವಣಾ ಮತ ಎಣಿಕೆ

🎬 Watch Now: Feature Video

thumbnail

By

Published : Dec 9, 2019, 9:19 AM IST

ಮೈಸೂರು: ಇಂದು ಉಪ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿತ್ತು. ಮೊದಲ ಸುತ್ತು ಮುಕ್ತಾಯವಾಗಿದ್ದು, ಮೊದಲ ಸುತ್ತಿನಲ್ಲಿ ಮನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್​ ಅಭ್ಯರ್ಥಿ ಎರಡನೇ ಸುತ್ತಿನಲ್ಲೂ ಮುನ್ನಡೆ ಉಳಿಸಿಕೊಂಡು ತೀವ್ರ ಪೈಪೋಟಿ ನೀಡುತ್ತಿದ್ದಾರೆ. ಹುಣಸೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್​ ಮುನ್ನಡೆಯಲ್ಲಿದ್ದಾರೆ. ಇನ್ನು ಮತ ಎಣಿಕೆಗೂ ಮುನ್ನಾ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಸಾಯಿಬಾಬಾ ದೇವಾಲಯಕ್ಕೆ ಹೋಗಿ ಪೂಜೆ ಸಲ್ಲಿಸಿ ಸಾಯಿಬಾಬಾನಿಗೆ ಹೊಸ ಬೆಳ್ಳಿ ಪಾದುಕೆ ಸಮರ್ಪಿಸಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಮತ ಎಣಿಕೆ ಆರಂಭವಾದ ಕೆಲವೇ ಹೊತ್ತಿನಲ್ಲೇ ಹೊರಟು ಹೋಗಿದ್ದಾರೆ. ಇನ್ನು ಈ ಕುರಿತ ಹೆಚ್ಚಿನ ಮಾಹಿತಿಯನ್ನು ನಮ್ಮ ಪ್ರತಿನಿಧಿ ನೀಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.