ಮಳೆ ಲೆಕ್ಕಿಸದೆ ಕರ್ತವ್ಯ ನಿಷ್ಠೆ ತೋರಿದ ಟ್ರಾಫಿಕ್ ಪೊಲೀಸ್.. ವಿಡಿಯೋ ವೈರಲ್! - ಮಳೆಯನ್ನು ಲೆಕ್ಕಿಸದೆ ಕರ್ತವ್ಯ ನಿರ್ವಹಿಸಿದ ಸಂಚಾರಿ ಪೊಲೀಸ್
🎬 Watch Now: Feature Video

ಹುಬ್ಬಳ್ಳಿ ನಗರದ ಚಿಟಗುಪ್ಪಿ ಆಸ್ಪತ್ರೆ ಸರ್ಕಲ್ನಲ್ಲಿ ಕಾರು ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾದ ಪರಿಣಾಮ ಸಂಚಾರ ದಟ್ಟಣೆ ಉಂಟಾಗಿತ್ತು. ಕೇಶ್ವಾಪುರ ಪೂರ್ವ ಸಂಚಾರಿ ಠಾಣೆ ಪೊಲೀಸ್ ಪೇದೆ ಶಂಬು ರೆಡ್ಡಿ ಅವರು ನಿರಂತರ ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೆ ರಸ್ತೆಯಲ್ಲಿ ನಿಂತು ಟ್ರಾಫಿಕ್ ಕ್ಲಿಯರ್ ಮಾಡುವ ಮೂಲಕ ತನ್ನ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ಸದ್ಯ ಪೊಲೀಸ್ ಸಿಬ್ಬಂದಿಯ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆ ವಿಡಿಯೋ ವೈರಲ್ ಆಗಿದೆ.