thumbnail

By

Published : Mar 2, 2020, 12:54 PM IST

ETV Bharat / Videos

ದೇಶ ವಿರೋಧಿ ಘೋಷಣೆ ಕೂಗುವವರಿಗೆ ಗುಂಡಿಕ್ಕಲು ಕಾನೂನು ತನ್ನಿ: ಕೇಂದ್ರಕ್ಕೆ ಬಿ ಸಿ ಪಾಟೀಲ್ ಮನವಿ

ಬೆಂಗಳೂರು: ದೇಶ ವಿರೋಧಿ ಘೋಷಣೆ ಕೂಗುವವರನ್ನ ಗುಂಡಿಟ್ಟು ಹತ್ಯೆ ಮಾಡಲು ಶೂಟ್ ಅಟ್ ಸೈಟ್ ಕಾನೂನು ಜಾರಿಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವುದಾಗಿ ಕೃಷಿ ಸಚಿವ ಬಿ ಸಿ ಪಾಟೀಲ್​ ಹೇಳಿದ್ದಾರೆ. ಅಧಿವೇಶನಕ್ಕೆ ಹಾಜರಾಗಲು ಆಗಮಿಸಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶ ವಿರೋಧಿ ಘೋಷಣೆ ಕೂಗುವುದು ಇಂದಿನ ದಿನಗಳಲ್ಲಿ ಫ್ಯಾಶನ್​​ ಆಗಿದ್ದು, ದೇಶಭಕ್ತಿಗೆ ಧಕ್ಕೆ ತರುವ ಇಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ. ಒಂದು ವೇಳೆ ಪಾಕಿಸ್ತಾನದಲ್ಲಿ ಈ ರೀತಿಯ ಘೋಷಣೆ ಕೂಗಿದ್ರೆ ನಡು ರಸ್ತೆಯಲ್ಲೇ ನಿಲ್ಲಿಸಿ ಶಿರಚ್ಛೇದ ಮಾಡುತ್ತಾರೆ. ನಮ್ಮ ದೇಶ ಅಷ್ಟೊಂದು ಕ್ರೂರವಾಗಿಲ್ಲ. ಆದ್ರೆ ಇಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.