thumbnail

By

Published : Mar 23, 2020, 6:17 AM IST

ETV Bharat / Videos

ಜನತಾ ಕರ್ಫ್ಯೂ ಯಶಸ್ಸು: ಚಪ್ಪಾಳೆ ತಟ್ಟಿ, ಜಾಗಟೆ ಬಾರಿಸಿ ಗೌರವ ಸಲ್ಲಿಕೆ

ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ ಜನತಾ ಕರ್ಫ್ಯೂಗೆ ಕಾರವಾರ, ಹರಿಹರ, ಗುಂಡ್ಲುಪೇಟೆ, ಪುತ್ತೂರು ಹಾಗೂ ಉಡುಪಿಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಪೆಟ್ರೋಲ್ ಬಂಕ್, ಹೋಟೆಲ್, ಬೀದಿ ಬದಿ ವ್ಯಾಪಾರ, ಆಟೋ- ಬಸ್ ಸಂಚಾರ ಎಲ್ಲಾ ಹೋಟೆಲ್, ಬಾರ್​ಗಳು ಬಂದ್ ಆಗಿದ್ದವು. ಖಾಸಗಿ ಹಾಗೂ ಕೆಎಸ್​ಆರ್​ಟಿಸಿ ಬಸ್​ಗಳು ರಸ್ತೆಗಿಳಿಯದ ಕಾರಣ ಪ್ರಯಾಣಿಕರಿಲ್ಲದೆ ನಿಲ್ದಾಣಗಳು ಬಿಕೋ ಎನ್ನುತ್ತಿದ್ದವು. ತುರ್ತು ಅವಶ್ಯಕತೆಗಳಾದ ಮೆಡಿಕಲ್ ಶಾಪ್, ಆಸ್ಪತ್ರೆಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಸಂಜೆ 5 ಗಂಟೆಯ ವೇಳೆಗೆ ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವರಿಗೆ ನಾಗರಿಕರು ಗಂಟೆ, ಜಾಗಟೆ, ಕೊಳಲು, ಚಪ್ಪಾಳೆ ಬಾರಿಸಿ ಗೌರವ ಸಲ್ಲಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.