ಜನತಾ ಕರ್ಫ್ಯೂ ಬೆಂಬಲಿಸಿ ಸಿಲಿಕಾನ್​ ಸಿಟಿ​ ಸ್ತಬ್ಧ: ರಸ್ತೆಗಳು ಖಾಲಿ ಖಾಲಿ

By

Published : Mar 22, 2020, 6:11 PM IST

thumbnail
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಜನತಾ ಕರ್ಫ್ಯೂಗೆ ಸಿಲಿಕಾನ್​ ಸಿಟಿಯಲ್ಲಿ ​ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ಹೀಗಾಗಿ ಸದಾ ವಾಹನ ದಟ್ಟಣೆಯಿಂದ ಗಿಜಿಗುಡುತ್ತಿದ್ದ ನಗರದ ಪ್ರಮುಖ ರಸ್ತೆಗಳಾದ ಹೆಬ್ಬಾಳ ರಸ್ತೆ, ವಿಮಾನ ನಿಲ್ದಾಣ ರಸ್ತೆ, ಶಿವಾನಂದ ವೃತ್ತ, ಕಾವೇರಿ ವೃತ್ತ ಸೇರಿದಂತೆ ಎಲ್ಲಾ ರಸ್ತೆಗಳು ಖಾಲಿ ಖಾಲಿಯಾಗಿವೆ. ಇನ್ನು ಬಂದ್​ ಮಧ್ಯೆ ತುರ್ತು ಸೇವೆಯ ಆ್ಯಂಬುಲೆನ್ಸ್​ಗಳು ಓಡಾಟ ನಡೆಸುತ್ತಿದ್ದು, ನಗರದಾದ್ಯಂತ ಹೊಯ್ಸಳ ಪೊಲೀಸರು ಗಸ್ತು ತಿರುಗುತ್ತಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.