thumbnail

By

Published : Aug 3, 2020, 8:04 PM IST

ETV Bharat / Videos

ಬಿಎಸ್​​ವೈ ಶೀಘ್ರ ಗುಣಮುಖರಾಗಲಿ: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿ

ಸಕಲೇಶಪುರ: ಕೊರೊನಾ ಪೀಡಿತರಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ಶೀಘ್ರ ಗುಣಮುಖರಾಗಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಶಾಸಕ ಹೆಚ್.ಕೆ ಕುಮಾರಸ್ವಾಮಿ ಹೇಳಿದರು. ತಾಲೂಕಿನ ಬಾಗೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್-19 ದೇಶದೆಲ್ಲೆಡೇ ವ್ಯಾಪಕವಾಗಿ ಭಾದಿಸುತ್ತಿದ್ದು, ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೂ ಸಹ ಕೊರೊನಾ ಭಾದಿಸಿದೆ. ಈ ಹಿನ್ನೆಲೆಯಲ್ಲಿ ಅವರು ಶೀಘ್ರವಾಗಿ ಗುಣಮುಖರಾಗಿ‌ ಕರ್ತವ್ಯ ನಿರ್ವಹಿಸಲಿ ಹಾಗೂ ಇತರ ರೋಗಿಗಳು ಸಹ ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನನ್ನು ಪ್ರಾರ್ಥಿಸುತ್ತೇನೆ ಎಂದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.