thumbnail

By

Published : Nov 1, 2020, 12:46 PM IST

ETV Bharat / Videos

ಗದಗನಲ್ಲಿ ಸರಳವಾಗಿ 65ನೇ ಕನ್ನಡ ರಾಜ್ಯೋತ್ಸವ ಆಚರಣೆ

65ನೇ ಕನ್ನಡ ರಾಜ್ಯೋತ್ಸವವನ್ನು ನಗರದ ಕೆ ಹೆಚ್ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಸಚಿವ ಸಿ ಸಿ ಪಾಟೀಲ್ ಧ್ವಜಾರೋಹಣ ನೆರವೇರಿಸಿದರು. ಗದಗ ಕ್ಷೇತ್ರದ ಶಾಸಕ ಹೆಚ್ ಕೆ ಪಾಟೀಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಚಿವ ಸಿ ಸಿ ಪಾಟೀಲ್, ಪೊಲೀಸ್ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಸನ್ಮಾನಿಸಲಾಯಿತು. ನಗರದಲ್ಲಿ ಕನ್ನಡ ತಾಯಿ ಭುವನೇಶ್ವರಿ ಮೂರ್ತಿ ಮೆರವಣಿಗೆ ನಡೆಯಿತು. ಮೆರವಣಿಗೆಗೆ ನಗರದ ಮುನಿಸಿಪಲ್ ಶಾಲಾ ಆವರಣದಲ್ಲಿ ಚಾಲನೆ ನೀಡಲಾಯಿತು. ಈ ವೇಳೆ ಕನ್ನಡ ಏಕೀಕರಣಕ್ಕೆ ಶ್ರಮಿಸಿದ ಹಲವು ಮಹನೀಯರ ವೇಷ ಧರಿಸಿದ್ದ ಬಾಲಕರು ಮೆರವಣಿಗೆಯ ಕೇಂದ್ರ ಬಿಂದುವಾಗಿದ್ದರು. ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ತಮ್ಮ ಕಲೆ ಪ್ರದರ್ಶನ ಮಾಡಿದವು. ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಪಂ ಸಿಇಒ, ಡಿಎಫ್‌ಒ, ಜಿಪಂ ಅಧ್ಯಕ್ಷಕರು ಹಾಗೂ ಜನಪ್ರತಿನಿಧಿಗಳು, ಅಧಿಕಾರಿಗಳಿದ್ದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.