ಸೂಚನಾ ಫಲಕ ಇಲ್ಲದ ಕಾರಣ ನಿಟ್ಟಾಲಿ ಕ್ರಾಸ್ನಲ್ಲಿ ಅಪಘಾತ ನಡೆದಿದೆ: ಕೊಪ್ಪಳ ಎಸ್ಪಿ - ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9605578-116-9605578-1605872989166.jpg)
ಜಿಲ್ಲೆಯ ಕುಕನೂರು ತಾಲೂಕಿನ ನಿಟ್ಟಾಲಿ ಕ್ರಾಸ್ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 367ರ ಕಾಮಗಾರಿ ಇನ್ನೂ ನಡೆಯುತ್ತಿದ್ದು, ಅಲ್ಲಿ ಯಾವುದೇ ಸೂಚನಾ ಫಲಕ ಇಲ್ಲದ ಕಾರಣ ನಿಟ್ಟಾಲಿ ಕ್ರಾಸ್ನಲ್ಲಿ ಭೀಕರ ಅಪಘಾತ ನಡೆದಿದೆ ಎಂಬುದು ಪ್ರಾಥಮಿಕವಾಗಿ ತಿಳಿದು ಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್ ಹೇಳಿದರು. ನಿಟ್ಟಾಲಿ ಕ್ರಾಸ್ನಿಂದ ಹೈವೇ ಪ್ರವೇಶಿಸಿದ ಬೈಕ್ಗೆ ಮಿನಿ ಬಸ್ ಡಿಕ್ಕಿ ಹೊಡೆದಿದೆ. ರಸ್ತೆ ಕಾಮಗಾರಿ ಇನ್ನೂ ನಡೆಯುತ್ತಿರುವುದರಿಂದ ಅಲ್ಲಿ ಸೂಚನಾ ಫಲಕ ಇಲ್ಲ. ಹೀಗಾಗಿ ಈ ಅಪಘಾತ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಅಪಘಾತಕ್ಕೆ ಯಾರು ಕಾರಣ ಎಂಬುದು ತನಿಖೆಯ ವೇಳೆ ಗೊತ್ತಾಗಲಿದೆ. ಘಟನೆಯಲ್ಲಿ ಈಗ ಒಟ್ಟು ನಾಲ್ಕು ಜನರು ಸಾವನ್ನಪ್ಪಿದ್ದಾರೆ. 20 ಜನರು ಗಾಯಗೊಂಡಿದ್ದಾರೆ. ಈ ಪೈಕಿ 6 ಜನ ಗಾಯಾಳುಗಳ ಪರಸ್ಥಿತಿ ವಿಷಮವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಎಸ್ಪಿ ಮಾಹಿತಿ ನೀಡಿದರು.