ಬಾಗಿಲು ತೆರೆದ ದೇವಸ್ಥಾನಗಳು: ಕದ್ರಿ ಮಂಜುನಾಥನ ದರ್ಶನ ಪಡೆದ ಮುಜರಾಯಿ ಸಚಿವರು - ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7522786-thumbnail-3x2-udp.jpg)
ಲಾಕ್ಡೌನ್ ಬಳಿಕ ಮುಚ್ಚಲ್ಪಟ್ಟಿದ್ದ ದೇವಸ್ಥಾನಗಳು ಇಂದಿನಿಂದ ಆರಂಭವಾಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಮುಜರಾಯಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೇವಸ್ಥಾನದ ಗೇಟ್ನಲ್ಲಿ ತಾಪಮಾನ ಪರೀಕ್ಷೆ ನಡೆಸಿಕೊಂಡು, ಸ್ಯಾನಿಟೈಸರ್ ಬಳಸಿ ದೇವಸ್ಥಾನ ಪ್ರವೇಶಿಸಿದರು. ದೇವಾಲಯದಲ್ಲಿದ್ದ ಮಹಾಗಣಪತಿ, ದುರ್ಗಾಪರಮೇಶ್ವರಿ, ಗೋಮುಖ ಗಣಪತಿ ದರ್ಶನ ಪಡೆದು, ಮಂಜುನಾಥ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಮೇಯರ್ ದಿವಾಕರ್ ಸೇರಿದಂತೆ ಅನೇಕರು ಸಚಿವರಿಗೆ ಸಾಥ್ ನೀಡಿದರು.