ನಮ್ಮ ರಾಜ್ಯದ ಭಿಕ್ಷೆಯಿಂದ ಸೀತಾರಾಮನ್ ಹಣಕಾಸು ಸಚಿವೆಯಾಗಿದ್ದಾರೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗರಂ - ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
🎬 Watch Now: Feature Video
ಮೈಸೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಮ್ಮ ರಾಜ್ಯದ ಭಿಕ್ಷೆಯಿಂದ ಹಣಕಾಸು ಸಚಿವೆಯಾಗಿ, ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ. ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ 3 ಕೃಷಿ ಕಾಯ್ದೆಗಳು ರೈತರ ವಿರೋಧಿಯಾಗಿವೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿದ್ದು, ಇದರಿಂದ ರೈತರು ತಮ್ಮ ಜಮೀನಿನಲ್ಲಿಯೇ ಕೂಲಿ ಆಳುಗಳಾಗಿ ಇರುತ್ತಾರೆ ಎಂದು ಆರೋಪಿಸಿದರು.