thumbnail

By

Published : Jul 9, 2020, 5:49 PM IST

ETV Bharat / Videos

ಲ್ಯಾಬ್ ಟೆಕ್ನಿಷಿಯನ್ ತಗುಲಿದ ಸೋಂಕು: ಕಾಫಿನಾಡಿನ ಜನರಲ್ಲಿ ಆತಂಕ

ಚಿಕ್ಕಮಗಳೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಸೋಂಕಿತರ ಜೊತೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದ್ದ ಜನರನ್ನು ನಗರದ ಮಧುವನ ಲೇಔಟ್​ನಲ್ಲಿರುವ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯ ಕಟ್ಟಡದಲ್ಲಿ ಕ್ವಾರಂಟೈನ್ ಮಾಡಲಾಗುತ್ತಿತ್ತು. ಇದೇ ಕಟ್ಟಡದಲ್ಲಿ ಸಾರ್ವಜನಿಕರ ಗಂಟಲು ದ್ರವವನ್ನೂ ಪರೀಕ್ಷಿಸಲಾಗುತ್ತಿತ್ತು. ಆದರೆ ಇಂದು ಈ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಲ್ಯಾಬ್ ಟೆಕ್ನಿಷಿಯನ್‌ಗೆ ಸೋಂಕು ತಗುಲಿರುವುದರಿಂದ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಈ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಗಂಟಲು ದ್ರವ ಪರೀಕ್ಷೆ ನಿಲ್ಲಿಸಲಾಗಿದೆ. ಈ ಕುರಿತು ಈಟಿವಿ ಭಾರತ ಪ್ರತಿನಿಧಿ ಪ್ರತ್ಯಕ್ಷ ವರದಿ ನೀಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.