ಭದ್ರಾವತಿಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಗುದ್ದಲಿ ಪೂಜೆ - Srirama Mandira at bhadravati
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10259580-thumbnail-3x2-smg.jpg)
ಶಿವಮೊಗ್ಗ: ಭದ್ರಾವತಿಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಭದ್ರಾವತಿಯ ಹೊಸಮನೆ ಬಡಾವಣೆ ಶಿವಾಜಿ ವೃತ್ತದಲ್ಲಿ ಶ್ರೀರಾಮ ಸೇವಾ ಸಮಿತಿ ಹಿಂದೂ ಕೋಟೆ ಟ್ರಸ್ಟ್ ವತಿಯಿಂದ ಶ್ರೀರಾಮನ ನೂತನ ಮಂದಿರವನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ಹಿನ್ನೆಲೆ ಗುದ್ದಲಿ ಪೂಜೆ ಮಾಡಿದ್ದು, ಕಾರ್ಯಕ್ರಮದಲ್ಲಿ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್, ಕದಿರೇಶರ್ ಸೇರಿದಂತೆ ಶ್ರೀರಾಮ ಮಂದಿರ ನಿರ್ಮಾಣ ಸಮಿತಿಯವರು ಹಾಜರಿದ್ದರು.