thumbnail

ಕೊರೊನಾ ಭೀತಿ: ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದೆ ಮಂಡ್ಯ ಬಸ್ ನಿಲ್ದಾಣ

By

Published : Apr 27, 2021, 12:12 PM IST

ಮಂಡ್ಯ: ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ಬಸ್​​​​​ಗಳಲ್ಲಿ ಸಂಚರಿಸಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಮಂಡ್ಯ ಕೆಎಸ್ಆರ್​ಟಿಸಿ ಬಸ್​ ನಿಲ್ದಾಣ ಪ್ರಯಾಣಿಕರಿಲ್ಲದೇ ಬಿಕೋ ಎನ್ನುತ್ತಿದೆ. ಗ್ರಾಮೀಣ ಪ್ರದೇಶಗಳಿಗೆ ಸಂಚರಿಸುತ್ತಿದ್ದ ಬಸ್​​​​ಗಳನ್ನು ಸ್ಥಗಿತಗೊಳಿಸಲಾಗಿದ್ದು, ಬೆಂಗಳೂರು, ಮೈಸೂರು ಹಾಗೂ ಕೆಲವು ತಾಲೂಕು ಕೇಂದ್ರಗಳಿಗಷ್ಟೇ ಬಸ್ ವ್ಯವಸ್ಥೆ ಮಾಡಲಾಗಿದೆ. ಇಂದು ಮಂಡ್ಯ ಡಿಪೋದಿಂದ ಕೇವಲ 23 ಬಸ್​​ಗಳು ಸಂಚಾರ ಮಾಡುತ್ತಿದ್ದು, ಬೆಂಗಳೂರಿಗೆ 10, ಮೈಸೂರಿಗೆ 4 ಹಾಗೂ ಇತರೆ ಮಾರ್ಗವಾಗಿ 9 ಬಸ್ ಮಾತ್ರ ಸಂಚಾರ ನಡೆಸುತ್ತಿವೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.