ಪುತ್ತೂರು ಮಹಾಲಿಂಗೇಶ್ವರ ದೇಗುಲದಲ್ಲಿ ಸಂಪ್ರೋಕ್ಷಣೆ, ಮಂತ್ರಾಕ್ಷತೆ ಕಾರ್ಯಕ್ರಮ
ಪುತ್ತೂರು (ದಕ್ಷಿಣ ಕನ್ನಡ): ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೆಯ ಬಳಿಕ ಮಂಗಳವಾರ ರಾತ್ರಿ ಸಂಪ್ರೋಕ್ಷಣೆ ಮತ್ತು ಮಂತ್ರಾಕ್ಷತೆ ಕಾರ್ಯಕ್ರಮ ನಡೆಯಿತು. ಪೂಜೆಯ ಬಳಿಕ ಬ್ರಹ್ಮಶ್ರೀ ವೇ.ಮೂ.ರವೀಶ ತಂತ್ರಿಯವರು ಭಕ್ತರಿಗೆ ಮಂತ್ರಾಕ್ಷತೆ ವಿತರಿಸಿದರು. ಇದೇ ಸಂದರ್ಭದಲ್ಲಿ ದೇವರ ನಿತ್ಯಬಲಿ ಉತ್ಸವ, ವಸಂತ ಕಟ್ಟೆ ಪೂಜೆ ನೆರವೇರಿಸಲಾಯಿತು.