ಕಾಂಗ್ರೆಸ್​​ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಕಿಡಿ!

By

Published : Feb 8, 2020, 4:35 PM IST

thumbnail
ಕಾಂಗ್ರೆಸ್ ತನ್ನ ದಿವಾಳಿತನಕ್ಕೆ ತಾನೇ ನಾಂದಿ ಹಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸತ್ತಿನಲ್ಲಿ ಉತ್ತರ ಕೊಡುವ ಸಾಮರ್ಥ್ಯ ಇಲ್ಲದೇ ಕಾಂಗ್ರೆಸ್ ನಾಯಕರು ಕೇಂದ್ರ ಸಚಿವ ಹರ್ಷವರ್ಧನ ಅವರ ಮೇಲೆ ದೈಹಿಕ ಹಲ್ಲೆಗೆ ಮುಂದಾಗಿರುವುದು ಸರಿಯಲ್ಲ ಎಂದರು. ಇದೇ ವೇಳೆ ಸಚಿವ ಸಂಪುಟದ ಕುರಿತು ‌ಮಾತನಾಡಿದ ಜೋಶಿ, ಬಿಜೆಪಿ ಸರ್ಕಾರ ಬರಲು ಕಾರಣರಾದವರಿಗೆ ಸಚಿವ ಸಂಪುಟದಲ್ಲಿ ಅವಕಾಶ ಸಿಕ್ಕಿದೆ. ಪಕ್ಷದ ಶಾಸಕರಿಗೂ ಅವಕಾಶ ಸಿಗುತ್ತೆ ಅಂತಾ ಹೇಳಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.