ಮಂತ್ರಾಲಯದ ರಾಯರ ಮಠಕ್ಕೆ ಸಚಿವ ಶ್ರೀರಾಮುಲು ಭೇಟಿ
ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠಕ್ಕೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಭೇಟಿ ನೀಡಿದ್ದಾರೆ. ಮೊದಲು ಗ್ರಾಮದ ಅಧಿದೇವತೆ ಶ್ರೀ ಮಂಚಾಲಮ್ಮ ದೇವಿ ದರ್ಶನ ಪಡೆದರು. ಬಳಿಕ ಶ್ರೀರಾಘವೇಂದ್ರ ಸ್ವಾಮಿ ಮೂಲ ಬೃಂದಾವನ ದರ್ಶನದ ಬಳಿಕ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಠದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.