ಕೇಂದ್ರ ಬಜೆಟ್ ನಿರಾಶದಾಯಕವಾಗಿದೆ: ಪರಿಷತ್ ಸದಸ್ಯ ಎನ್.ಎಸ್.ಬೋಸರಾಜ್
ದೇಶದಲ್ಲಿ ಪ್ರಸುತ್ತವಾಗಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಯುವಜನರು ಉದ್ಯೋಗವಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ನಿರುದ್ಯೋಗ ಹೋಗಲಾಡಿಸುವ ಯೋಜನೆ ಬಜೆಟ್ನಲ್ಲಿ ಇಲ್ಲ. ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರೈತರಿಗೆ ಮಾರುಕಟ್ಟೆಯಲ್ಲಿ ವೈಜ್ಞಾನಿಕ ಬೆಲೆ ಸಿಗುವ ನಿಟ್ಟಿನಲ್ಲಿ ಯಾವುದೇ ಪೂರಕ ಅಂಶಗಳು ಸಹ ಇಲ್ಲ. ಜನ ಸಾಮಾನ್ಯರ ಅವಶ್ಯಕ ವಸ್ತುಗಳ ಬೆಲೆ ಇಳಿಕೆಯಾಗಬೇಕಾಗಿತ್ತು. ಎಲ್ಲವನ್ನ ಬೆಲೆ ಹೆಚ್ಚಳ ಮಾಡುವ ಮೂಲಕ ಸಾರ್ವಜನಿಕರ ಮೇಲೆ ಹೊರೆ ಹಾಕಿದ್ದು, ಇದೊಂದು ನಿರಾಶದಾಯಕ ಬಜೆಟ್ ಎಂದು ವಿಧಾನಪರಿಷತ್ ಸದಸ್ಯ ಎನ್.ಎಸ್.ಬೋಸರಾಜ್ ಈಟಿವಿ ಭಾರತ್ ಜೊತೆ ಹೇಳಿದ್ದಾರೆ.
Last Updated : Feb 1, 2020, 7:19 PM IST