thumbnail

ತಮ್ಮೂರಿಗೆ ಮರಳುತ್ತಿದ್ದಾರೆ 500ಕ್ಕೂ ಹೆಚ್ಚು ವಲಸೆ ಕಾರ್ಮಿಕರು: ಜಿಲ್ಲಾಡಳಿತ ಮಾಡಿದೆ ಸಕಲ ಸಿದ್ಧತೆ

By

Published : Apr 25, 2020, 8:22 PM IST

ಉಡುಪಿ: ಕೊರೊನಾ ಲಾಕ್​ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ತಮ್ಮೂರಿಗೆ ಮರಳುತ್ತಿದ್ದಾರೆ. ರಾಜ್ಯ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ವ್ಯವಸ್ಥೆ ಮಾಡಲಾಗಿದ್ದು, ನಿರಾಶ್ರಿತರ ಶಿಬಿರಗಳಲ್ಲಿದ್ದ 500ಕ್ಕೂ ಹೆಚ್ಚು ಕಾರ್ಮಿಕರನ್ನು ಸರ್ಕಾರಿ ಬಸ್​ಗಳಲ್ಲಿ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ನಗರದ ಬೋರ್ಡ್ ಶಾಲೆಗಳಲ್ಲಿದ್ದ ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರಾವಾಡ ಜಿಲ್ಲೆಗಳ ಕಾರ್ಮಿಕರನ್ನು 20 ಬಸ್​ಗಳಲ್ಲಿ ಊರಿಗೆ ಕಳುಹಿಸುವ ಕಾರ್ಯವನ್ನು ಜಿಲ್ಲಾಡಳಿತ ಮಾಡಿದೆ. ಜೊತೆಗೆ ಸ್ಯಾನಿಟೈಸರ್, ಮಾಸ್ಕ್, ಫುಡ್ ಕಿಟ್ ನೀಡಿ ಕಾರ್ಮಿಕರನ್ನು ಜಿಲ್ಲಾಡಳಿತ ಬೀಳ್ಕೊಟ್ಟಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.