ಎನ್ಎಂಡಿಸಿ ಗಣಿಗಾರಿಕೆಯಲ್ಲಿ ಮಾತ್ರವಲ್ಲ ಸಾಮಾಜಿಕ ಕಳಕಳಿಯಲ್ಲೂ ಎತ್ತಿದ ಕೈ - 107ನೇ ರಾಷ್ಟ್ರೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನ

🎬 Watch Now: Feature Video

thumbnail

By

Published : Jan 6, 2020, 2:52 PM IST

ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಎನ್ಎಂಡಿಸಿ ಕಬ್ಬಿಣದ ಅದಿರು ಉತ್ಪಾದನೆ ಜೊತೆಗೆ ಹಲವು ಸಾಮಾಜಿಕ ಕಳಕಳಿ ಮೆರೆಯುವ ಕಾರ್ಯದ ಮೂಲಕ ಗುರುತಿಸಿಕೊಂಡಿದೆ. ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ನಡೆಯುತ್ತಿರುವ 107ನೇ ರಾಷ್ಟ್ರೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನದಲ್ಲಿ ಪ್ರಮುಖವಾಗಿ ಗಮನ ಸೆಳೆಯುತ್ತಿದೆ ಎನ್​ಎಂಡಿಸಿ. ದೇಶದ ಬಳಕೆಗೆ ಕಬ್ಬಿಣದ ಅದಿರು ಉತ್ಪಾದಿಸಿ ಕೊಡುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿಕೊಂಡಿರುವ ಸಂಸ್ಥೆ ನೈಸರ್ಗಿಕ ಕಬ್ಬಿಣದ ಅದಿರು ಉತ್ಪಾದಿಸುವ ಮೂಲಕ ಸ್ಟೀಲ್ ಉತ್ಪಾದನೆಗೆ ಸಹಕಾರಿಯಾಗುವ ಕಾರ್ಯನಿರ್ವಹಿಸುತ್ತಿದೆ. ದೇಶದ ವಜ್ರದ ಉತ್ಪಾದನೆಯಲ್ಲಿ ಕೂಡ ವಿನೂತನ ತಂತ್ರಜ್ಞಾನ ಬಳಸಿ ಕಾರ್ಯನಿರ್ವಹಿಸುತ್ತಿದೆ. ಈ ರೀತಿ ಕಬ್ಬಿಣ ಹಾಗೂ ವಜ್ರದ ಗಣಿಗಾರಿಕೆಯಲ್ಲಿ ಅತ್ಯಂತ ತಜ್ಞತೆ ಹೊಂದಿರುವ ಸಂಸ್ಥೆಯಾಗಿ ರಾಷ್ಟ್ರದಲ್ಲಿ ಗುಣಮಟ್ಟದ ಕಬ್ಬಿಣ ಮತ್ತು ವಜ್ರದ ಉತ್ಪಾದನೆಗೆ ತನ್ನದೇ ಕೊಡುಗೆ ನೀಡುತ್ತಿದೆ. ಕಬ್ಬಿಣದ ಅದಿರು ಹಾಗೂ ವಜ್ರದ ಗಣಿಗಾರಿಕೆ ಜೊತೆಗೆ ಸಂಸ್ಥೆ ಸಾಕಷ್ಟು ಸಾಮಾಜಿಕ ಕಳಕಳಿ ಮೆರೆಯುವ ಕಾರ್ಯವನ್ನು ಕೂಡ ಮಾಡುತ್ತಿದೆ. ಗುಡ್ಡಗಾಡು ಸುಮುದಾಯದ ನಿವಾಸಿಗಳ ಅನುಕೂಲಕ್ಕೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಆಸ್ಪತ್ರೆ ಹಾಗೂ ಶಾಲೆಗಳನ್ನು ನಿರ್ಮಿಸಿ ಇವರ ಬಳಕೆಗೆ ನೀಡಿದೆ ಎಂದು ಎನ್ಎಂಡಿಸಿ ಹೈದರಾಬಾದ್ ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕ ಡಾ. ಪ್ರಶಾಂತ್ ಶರ್ಮಾ ತಿಳಿಸಿದ್ದಾರೆ.

For All Latest Updates

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.