ಸೂರಿಗಾಗಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ: ನಿವೇಶನ ನೀಡುವಂತೆ ಪಟ್ಟು
ದಾವಣಗೆರೆ: ವಸತಿ ಯೋಜನೆಯಡಿ ನಿವೇಶನ ನೀಡುವಂತೆ ಆಗ್ರಹಿಸಿ ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಿರ್ಗತಿಕರು ಪ್ರತಿಭಟನೆ ನಡೆಸಿದರು. ಡಿಸಿ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಕಾರರು ಈ ಹಿಂದೇ ನಿವೇಶನ ನೀಡುತ್ತೇವೆ ಎಂದು ಹೇಳಿ ಮಾತಿಗೆ ತಪ್ಪಿದ್ದ ಹಳೆ ಜಿಲ್ಲಾಧಿಕಾರಿ ರಮೇಶ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ದಾವಣಗೆರೆಯಲ್ಲಿ ಸಾಕಷ್ಟು ಬಡ ಕುಟುಂಬಗಳು ಬಾಡಿಗೆ ಮನೆಗಳಲ್ಲಿ ಜೀವನ ಸಾಗಿಸುತ್ತಿದ್ದು, ಕೆವಲರಿಗೆ ಬಾಡಿಗೆ ನೀಡಲು ಕೂಡ ಆಗದ ಸ್ಥಿತಿಯಲ್ಲಿದ್ದು, ಸರ್ಕಾರದಿಂದ ನಿವೇಶನ ನೀಡುವಂತೆ ಡಿಸಿಗೆ ಮನವಿ ಮಾಡಿದರು.