ಪೈಪ್​ಲೈನ್ ಒಡೆದು ಕಾರಂಜಿಯಂತೆ ಚಿಮ್ಮಿದ ನೀರು..!

By

Published : Oct 19, 2020, 8:03 PM IST

thumbnail
ಗದಗ​​: ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯಿಂದ ಗದಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಲೈನ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ನೀರು ರೈತರ ಗದ್ದೆಗಳಿಗೆ ನುಗ್ಗಿ ಬೆಳೆ ಹಾನಿಯಾಗುವ ಆತಂಕ ಶುರುವಾಗಿದೆ. ಜೊತೆಗೆ ನೀರು ಆಕಾಶದೆತ್ತರಕ್ಕೆ ಚಿಮ್ಮುತ್ತಿದ್ದು, ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಇದೊಂದು ಮನರಂಜನೆಯ ತಾಣದಂತೆ ಭಾಸವಾಗುತ್ತಿದೆ. ಇನ್ನು ಪೈಪ್ ಒಡೆದ ಸ್ಥಳದ ಮೇಲ್ಭಾಗದಲ್ಲಿಯೇ ವಿದ್ಯುತ್ ತಂತಿ ಇದೆ. ಚಿಮ್ಮುತ್ತಿರುವ ನೀರು ವಿದ್ಯುತ್‌ ತಂತಿಗೆ ತಗಲುತ್ತಿದೆ. ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ದುರಸ್ತಿ ಕಾರ್ಯಕ್ಕೆ ಮುಂದಾಗಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.