ಸಿಎಂ ಸೇರಿದಂತೆ ಗಣ್ಯರಿಂದ ಧರ್ಮೇಗೌಡರ ಅಂತಿಮ ದರ್ಶನ
ಚಿಕ್ಕಮಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡ, ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸೇರಿದಂತೆ ಹಲವಾರು ಗಣ್ಯರು ಪರಿಷತ್ ಉಪಸಭಾಪತಿ ಧರ್ಮೇಗೌಡರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಚಿಕ್ಕಮಗಳೂರು ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯಿಂದ ಗೌರವ ಸಲ್ಲಿಸಲಾಯಿತು. ಸಖರಾಯಪಟ್ಟಣದ ಸಾವಿರಾರು ಜನರು ಧರ್ಮೇಗೌಡರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಸರಪನಹಳ್ಳಿಯ ತೋಟದ ಮನೆಯಲ್ಲಿ ಹಿಂದೂ ವಿಧಿ ವಿಧಾನದಂತೆ ಅಂತ್ಯಕ್ರಿಯೆ ನಡೆಯಲಿದೆ.