ಎಸ್ಪಿಯಿಂದ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳಿಗೆ ಪ್ರಶಂಸನಾ ಪತ್ರ
ಬಳ್ಳಾರಿ: ಮೂರು ಪ್ರಕರಣ ಪತ್ತೆ ಹಚ್ಚಿದ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಎಸ್ಪಿ ಸೈದುಲು ಅಡಾವತ್ ಅವರು ಪ್ರಶಂಸೆ ಪತ್ರ ನೀಡಿ ಗೌರವಿಸಿದರು. ಈಟಿವಿ ಭಾರತದೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠ ಸೈದುಲು ಅಡಾವತ್ ಅವರು, ಕಳೆದ ಎರಡು ವಾರಗಳಲ್ಲಿ ಬಳ್ಳಾರಿ ಜಿಲ್ಲೆಯಲ್ಲಿನ ಮೂರು ಪ್ರಕರಣ ಪತ್ತೆ ಹಚ್ಚಿದ 8 ಪೊಲೀಸ್ ಕಾನ್ಸ್ಟೇಬಲ್, ಹೆಡ್ ಕಾನ್ಸ್ಟೇಬಲ್, ಅಸಿಸ್ಟೆಂಟ್ ಸಬ್ಇನ್ಸ್ಪೆಕ್ಟರ್, ಇನ್ಸ್ಪೆಕ್ಟರ್ಗಳಿಗೆ ಪ್ರಶಂಸೆಯ ಪತ್ರಗಳನ್ನು ವಿತರಣೆ ಮಾಡಲಾಯಿತು ಎಂದರು.